¶ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
TSK
TSK · ಲೂಕನು 16:2
Treasury of Scripture Knowledge references in ಕನ್ನಡ IRV.
ಅವರಿಗೆ, “ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತೇನೆ. ಹೀಗೇಕೆ ಮಾಡುತ್ತೀರಿ?”
ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
¶ ‹“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.›
ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.
ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು.
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.