ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ; ಅವನ ಸುಖವು ಅಸ್ಥಿರವಾಗಿರುವುದು.
TSK
TSK · ಲೂಕನು 16:24
Treasury of Scripture Knowledge references in ಕನ್ನಡ IRV.
ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›
‹ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.›
‹ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು›‹ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು”› ಎಂದು ಹೇಳಿದನು.
ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.
ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.
ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.