TSK

TSK · ಲೂಕನು 16:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!

ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.

ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.

ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.

ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.

‹“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ!› ‹ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.›

‹ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,›

ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.

ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.

ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.