ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.
TSK
TSK · ಲೂಕನು 19:21
Treasury of Scripture Knowledge references in ಕನ್ನಡ IRV.
ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ
ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?
ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.