TSK

TSK · ಲೂಕನು 2:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.

ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.

ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.

ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.

ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.

¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›

‹ನೀನು ನನಗೆ ಕೊಟ್ಟ ಕೆಲಸವನ್ನು ನಾನು›‹ನೆರವೇರಿಸಿ›‹ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.›

¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.

ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,

ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.

ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.

ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,

ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.