¶ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.
TSK
TSK · ಲೂಕನು 2:34
Treasury of Scripture Knowledge references in ಕನ್ನಡ IRV.
ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.
ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.
‹ಮನುಷ್ಯಕುಮಾರನು ಬಂದನು,›‹ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು›‹ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ.›‹ಆದರೆ ಜ್ಞಾನವು ಅದರ›‹ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ”› ಅಂದನು.
‹ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು”› ಎಂದು ಹೇಳಿದನು.
“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
‹ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.›
¶ ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.
¶ “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?
¶ ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.
ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
¶ ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
¶ ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.