TSK

TSK · ಲೂಕನು 20:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.

ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.

ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.

ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”

ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.

“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.

“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.

ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.

ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,

ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

‹ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,›

‹ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.›

‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›