ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
TSK
TSK · ಲೂಕನು 20:21
Treasury of Scripture Knowledge references in ಕನ್ನಡ IRV.
ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
¶ ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,
¶ ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.