¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
TSK
TSK · ಲೂಕನು 21:22
Treasury of Scripture Knowledge references in ಕನ್ನಡ IRV.
ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ?
ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.
ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.
ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.
ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.
¶ ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.
ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.