ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
TSK
TSK · ಲೂಕನು 22:18
Treasury of Scripture Knowledge references in ಕನ್ನಡ IRV.
ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.
ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.
‹ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ”› ಅಂದನು.
ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.
ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ.
‹ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.›
ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.