ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
TSK
TSK · ಲೂಕನು 23:5
Treasury of Scripture Knowledge references in ಕನ್ನಡ IRV.
ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
¶ ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
¶ ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, ‹“ನನ್ನನ್ನು ಹಿಂಬಾಲಿಸು”› ಎಂದನು.
ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
¶ ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.
ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.