TSK

TSK · ಲೂಕನು 24:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.

ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.

ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.

ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.

ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.