ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
TSK
TSK · ಲೂಕನು 6:8
Treasury of Scripture Knowledge references in ಕನ್ನಡ IRV.
“ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.
ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
ಆತನು ಕೈಬತ್ತಿದ್ದವನಿಗೆ, ‹“ಎದ್ದು ನಡುವೆ ನಿಂತುಕೋ”› ಎಂದು ಹೇಳಿದನು.
ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, ‹“ನಿನ್ನ ರೋಗವು ಬಿಡುಗಡೆಯಾಯಿತು”› ಎಂದು ಹೇಳಿ
‹ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.›
ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.
¶ ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.