ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,
TSK
TSK · ಲೂಕನು 8:13
Treasury of Scripture Knowledge references in ಕನ್ನಡ IRV.
ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ.
ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.
¶ ‹“ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;›
¶ ‹“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.›
‹ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.›
ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
‹ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.›
ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
¶ ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?
ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.
ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.
ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.
“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.