TSK

TSK · ಲೂಕನು 8:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.

ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.

‹ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.›

‹ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”› ಎಂದು ಹೇಳಿದನು.

¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.

‹ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.›

‹ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ›

ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.

¶ ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.

ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.

¶ ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.