ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
TSK
TSK · ಲೂಕನು 9:26
Treasury of Scripture Knowledge references in ಕನ್ನಡ IRV.
‹ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.›
‹ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.›
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
‹ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು”› ಎಂದನು.
‹ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು›
ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.
¶ ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,
‹ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.›‹ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,›‹ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.›
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.