¶ ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.
TSK
TSK · ಮಲಾಕಿಯ 1:2
Treasury of Scripture Knowledge references in ಕನ್ನಡ IRV.
ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
¶ ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.
ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು.
¶ ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.
ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
¶ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
¶ “ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.
ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.