ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?
TSK
TSK · ಮಲಾಕಿಯ 1:4
Treasury of Scripture Knowledge references in ಕನ್ನಡ IRV.
ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.
ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.
ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.
ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.
ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?
ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.
ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.
“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.
¶ “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.