ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
TSK
TSK · ಮಲಾಕಿಯ 2:10
Treasury of Scripture Knowledge references in ಕನ್ನಡ IRV.
ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,
ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.
ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.
ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.
ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!
ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.
¶ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.
ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.
‹ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ”› ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.
‹ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು”› ಎಂದು ಹೇಳಿದನು.
ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
¶ ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?
ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?
ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.