¶ ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
TSK
TSK · ಮಲಾಕಿಯ 2:14
Treasury of Scripture Knowledge references in ಕನ್ನಡ IRV.
ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.
ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ.
ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
¶ ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.
ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!
ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.
ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”
“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.