ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.
TSK
TSK · ಮಲಾಕಿಯ 2:9
Treasury of Scripture Knowledge references in ಕನ್ನಡ IRV.
ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.
ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,
ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.
ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.
¶ ‹“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.›
¶ ‹“ಮತ್ತು, ನೀನು ಸುಳ್ಳಾಣೆಯಿಡಬಾರದು;›‹‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.›
ಆತನು ಅವನಿಗೆ, ‹“ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.›‹ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ”› ಎಂದು ಹೇಳಿದನು.
‹ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ”› ಎಂದು ಹೇಳಿದನು.
¶ ‹“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.›
¶ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.