ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.
TSK
TSK · ಮಲಾಕಿಯ 3:11
Treasury of Scripture Knowledge references in ಕನ್ನಡ IRV.
ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.
ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.
“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.