“ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಿಬೇಕು.
TSK
TSK · ಮಲಾಕಿಯ 3:3
Treasury of Scripture Knowledge references in ಕನ್ನಡ IRV.
“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.
ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
“ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.
¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.
‹ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,›‹ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ›‹ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ›‹ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.›