TSK

TSK · ಮಲಾಕಿಯ 4:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.

ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”

ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.

ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.

ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.”

¶ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

‹ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.›

‹ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.›

¶ ‹“ಇದಲ್ಲದೆ›‹ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ› (ಇದನ್ನು ಓದುವವನು ತಿಳಿದುಕೊಳ್ಳಲಿ). ‹ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.›

ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,

‹ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.›

¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.