TSK

TSK · ಮಾರ್ಕನು 13:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.

ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,

‹ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.›

ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.