‹ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.›
TSK
TSK · ಮಾರ್ಕನು 13:9
Treasury of Scripture Knowledge references in ಕನ್ನಡ IRV.
¶ ‹“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.›
‹ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ”› ಎಂದು ಹೇಳಿದನು.
‹ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ”› ಅಂದನು.
‹ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.›
¶ ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.
¶ ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;
‹ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು”› ಎಂದು ಹೇಳಿದನು.
ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.
¶ ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.
¶ ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.
¶ ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.
‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›
¶ ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.