ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
TSK
TSK · ಮಾರ್ಕನು 14:21
Treasury of Scripture Knowledge references in ಕನ್ನಡ IRV.
ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
‹ಆದರೆ›‹ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.›
‹ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?”› ಎಂದು ಹೇಳಿದನು.
¶ ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
‹ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ”› ಅಂದನು.
¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.
ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,