ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.
TSK
TSK · ಮಾರ್ಕನು 14:41
Treasury of Scripture Knowledge references in ಕನ್ನಡ IRV.
¶ ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
¶ ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”
ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, ‹“ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.›
ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, ‹“ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು”› ಹೇಳಿದನು.
¶ ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.
ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.
‹ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?›
¶ ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, ‹“ತಂದೆಯೇ,›‹ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.›