ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ
TSK
TSK · ಮಾರ್ಕನು 16:15
Treasury of Scripture Knowledge references in ಕನ್ನಡ IRV.
ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
¶ ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, ‹“ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;›
‹ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.›
‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›
ಯೇಸು ಅವರಿಗೆ, ‹“ನಿಮಗೆ ಸಮಾಧಾನವಾಗಲಿ”› ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.
ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.
ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
¶ ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.