¶ ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.
TSK
TSK · ಮಾರ್ಕನು 2:27
Treasury of Scripture Knowledge references in ಕನ್ನಡ IRV.
ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.
ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.
ಆಗ ಯೇಸು ಅವರಿಗೆ, ‹“ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?”› ಎಂದು ಕೇಳಿ,
ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.
¶ ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.