ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.
TSK
TSK · ಮಾರ್ಕನು 4:12
Treasury of Scripture Knowledge references in ಕನ್ನಡ IRV.
ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
ಆತನು, ‹“ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.›
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.