TSK

TSK · ಮಾರ್ಕನು 4:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.

ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

ಆದರೆ, ಕರ್ತನು ಆಕೆಗೆ, ‹“ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.›

‹ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.›

¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.

ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.

ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.