ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.
TSK
TSK · ಮಾರ್ಕನು 4:26
Treasury of Scripture Knowledge references in ಕನ್ನಡ IRV.
ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.
ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!
ಅಂದಿನಿಂದ ಯೇಸು, ‹“ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು”› ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.›
¶ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.›
‹“ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.›
‹“ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.›
¶ ತರುವಾಯ ಯೇಸು ಕೇಳಿದ್ದೇನಂದರೆ, ‹“ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?›
‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು›
ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.