ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.
TSK
TSK · ಮಾರ್ಕನು 4:38
Treasury of Scripture Knowledge references in ಕನ್ನಡ IRV.
ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?
ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?
ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?
ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.
ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.
ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.
ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.