TSK

TSK · ಮಾರ್ಕನು 7:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.

ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.

ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?

ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.

ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.

ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.

ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;

ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?

ಯೇಸು ಅವರ ಆಲೋಚನೆಗಳನ್ನು ತಿಳಿದು, ‹“ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?›

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.›

ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.

ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.

ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?

ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.