¶ ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.
TSK
TSK · ಮತ್ತಾಯನು 1:16
Treasury of Scripture Knowledge references in ಕನ್ನಡ IRV.
ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.
ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.
ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
¶ ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;
¶ ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,