¶ ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.
TSK
TSK · ಮತ್ತಾಯನು 10:23
Treasury of Scripture Knowledge references in ಕನ್ನಡ IRV.
¶ ‹“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ”› ಅಂದನು.
‹ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.›
‹ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು›
ಯೇಸು ಪ್ರತ್ಯುತ್ತರವಾಗಿ, ‹“ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ›‹ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ”› ಅಂದನು.
ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
‹ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.›
ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.
¶ ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು.
ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.