TSK

TSK · ಮತ್ತಾಯನು 11:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;

ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.

ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,

ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.

ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.

“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.

ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.

ಅದಕ್ಕೆ ಯೇಸು, ‹“ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.›

ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, ‹“ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?”› ಎಂದು ಕೇಳಿದನು.

ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, ‹“ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.›

‹“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ”› ಪ್ರಾರ್ಥಿಸಿದನು.

¶ ಆಗ ಯೇಸುವು, ‹“ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು”› ಎಂದನು.

ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.

“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.

¶ ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.

ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.

¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.