TSK

TSK · ಮತ್ತಾಯನು 11:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,

ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.

‹“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.›

¶ ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.

‹ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.›

ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;

¶ ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.

¶ ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.

ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,

ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.

ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.