ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
TSK
TSK · ಮತ್ತಾಯನು 12:10
Treasury of Scripture Knowledge references in ಕನ್ನಡ IRV.
ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.
ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.
‹“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?”› ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)
ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.