ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
TSK
TSK · ಮತ್ತಾಯನು 13:11
Treasury of Scripture Knowledge references in ಕನ್ನಡ IRV.
ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›
‹ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.›
ಆತನು, ‹“ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.›
ಆತನು ‹“ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,”› ಎಂದನು.
ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
¶ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
¶ ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.
ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.
ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.
¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
¶ ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.