TSK

TSK · ಮತ್ತಾಯನು 13:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.

ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.

¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

‹ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ›‹ರಾಜ್ಯದ ಮಕ್ಕಳು.›

‹ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.›

‹ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.›

‹ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.›

¶ ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.

ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.

ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.

¶ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.

ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.

ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.

ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.

¶ ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.