TSK

TSK · ಮತ್ತಾಯನು 13:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,

ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.

‹ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.›

‹ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.›

‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›

‹ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.›

ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ ‹“ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.›

‹ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.›

ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.

¶ ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, ‹“ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.›

‹ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.›

‹“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.›

ಯೇಸು ಅವರಿಗೆ ‹“ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.›

ಅದಕ್ಕೆ ಯೇಸು ‹“ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ”› ಎಂದನು.

‹ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.›

ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.

ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.

ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.

¶ ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.

ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.

ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.

‹ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.›‹ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.›