TSK

TSK · ಮತ್ತಾಯನು 13:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಾಯೇಲಿನ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡ್ದಿದು ನಿಜ. ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಮೋಹಿಸಿ ಆಸೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ” ಎಂದನು.

“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.

ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.

ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.

¶ ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.

¶ ‹“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು›‹ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.›

¶ ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, ‹“ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ”› ಎಂದು ಹೇಳಿದನು.

ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.

‹ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.›

ಆಗ ಯೇಸು ಅವನನ್ನು ನೋಡಿ, ‹“ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.›

¶ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ

ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.

ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.

¶ ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.