ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.
TSK
TSK · ಮತ್ತಾಯನು 16:27
Treasury of Scripture Knowledge references in ಕನ್ನಡ IRV.
“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
‹ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.›
‹ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.›
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
‹ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು”› ಎಂದನು.
‹ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.›
‹ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು”› ಎಂದು ಹೇಳಿದನು.
ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,
ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.
¶ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
¶ ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.