ಯೋಬನು 2:7
TSK
ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
TSK
Treasury of Scripture Knowledge references in ಕನ್ನಡ IRV.
ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.
ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.
¶ ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.