TSK

TSK · ಮತ್ತಾಯನು 18:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.

ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,

ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.

¶ ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?

ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

¶ ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,

‹ಆದರೆ›‹ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.›

‹ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.›

‹ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ”› ಅಂದನು.

ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,

ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.

ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

¶ ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.

ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.

¶ ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.

ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.

ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.

“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”

¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.

ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.