TSK

TSK · ಮತ್ತಾಯನು 18:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.

¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.

‹ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.›

ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.

‹ಮತ್ತು ಅನೀತಿವಂತರಾದ ಇವರು›‹ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.›

‹“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.›

‹‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.›

ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.

ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.

ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.