ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
TSK
TSK · ಮತ್ತಾಯನು 19:22
Treasury of Scripture Knowledge references in ಕನ್ನಡ IRV.
ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.
‹ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.›
‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›
ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.
ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.