ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.
TSK
TSK · ಮತ್ತಾಯನು 19:23
Treasury of Scripture Knowledge references in ಕನ್ನಡ IRV.
ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.
‹ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.›
ಅವರಿಗೆ, ‹“ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, ‹“ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ”› ಎಂದು ಹೇಳಿದನು.
‹ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ”› ಅಂದನು.
ಆಗ ಯೇಸು ಅವನನ್ನು ನೋಡಿ, ‹“ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.›
ಅದಕ್ಕೆ ಯೇಸು ‹“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.›
¶ ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.
¶ ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.
¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.